ದಿಲ್ಲಿ ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ಕರ್ನಾಟಕದ 300 ಮಂದಿ ಭಾಗಿ: ಆರೋಗ್ಯ ಸಚಿವ ಶ್ರೀರಾಮುಲು
ಬೆಂಗಳೂರು, ಎ.1: ತಬ್ಲೀಗಿ ಜಮಾಅತ್ ನ ದಿಲ್ಲಿ ಕೇಂದ್ರ ಕಚೇರಿಯಾಗಿರುವ ಮರ್ಕಝ್ ನಿಝಾಮುದ್ದೀನ್ ನಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತ ಮಾಹಿತಿಯನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಶ್ಯ ಹಾಗೂ ಮಲೇಶ್ಯದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ ಲಭಿಸಿದೆ. ಈ ಪೈಕಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂದಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ.
— B Sriramulu (@sriramulubjp) April 1, 2020