ಬೆಂಗಳೂರು: ಲಾಕ್ಡೌನ್ ನಿಂದ ಮದ್ಯ ಸಿಗದೆ ಬೇಸತ್ತು ಆತ್ಮಹತ್ಯೆ
ಬೆಂಗಳೂರು, ಎ.1: ಲಾಕ್ಡೌನ್ ನಿಂದಾಗಿ ಕುಡಿಯಲು ಮದ್ಯ ಸಿಗದೇ ನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಮಾಗಡಿ ತಾಲೂಕಿನ ಹುಲಿಕೆರೆಯ ರಮೇಶ್(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳಿಂದ ಜಾರಿಯಲ್ಲಿರುವ ಲಾಕ್ಡೌನ್ನಿಂದ ಮದ್ಯದಂಗಡಿಗಳಿಗೆ ಬೀಗ ಜಡಿಯಲಾಗಿದೆ. ಕಳೆದು ಮೂರು ದಿನಗಳಿಂದ ಮದ್ಯಕ್ಕಾಗಿ ಹುಡುಕಾಟ ನಡೆಸಿದ್ದ ರಮೇಶ್ ಮದ್ಯ ಸಿಗದೆ ಬೇಸತ್ತಿದ್ದು, ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಕುದೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story