ರಾಮನಗರ: ಮಡಿದ ಪತ್ರಕರ್ತನ ಕುಟುಂಬಕ್ಕೆ ಕುಮಾರಸ್ವಾಮಿ ಸಾಂತ್ವನ, 5 ಲಕ್ಷ ರೂ. ಪರಿಹಾರ
ಬೆಂಗಳೂರು, ಎ. 22: ರಸ್ತೆ ಅಪಘಾತದಲ್ಲಿ ನಿನ್ನೆ ಸಾವನ್ನಪ್ಪಿದ ಖಾಸಗಿ ಸುದ್ದಿವಾಹಿನಿಯ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಬುಧವಾರ ರಾಮನಗರ ಜಿಲ್ಲೆ ಹಾರೋಹಳ್ಳಿ ಸಮೀಪದ ಪಡುವಣಗೆರೆಗೆ ಖುದ್ದು ಭೇಟಿ ನೀಡಿದ ಕುಮಾರಸ್ವಾಮಿ, ಹನುಮಂತು ಅವರ ಪತ್ನಿ ಶಶಿಕಲಾ ಹಾಗೂ ಅವರ ತಂದೆ-ತಾಯಿಗೆ ಸಾಂತ್ವನ ಹೇಳಿದರು. ಇದೇ ವೇಳೆ 5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು.
'ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ, ನಿಮ್ಮೊಂದಿಗೆ ನಾನಿದ್ದೇನೆ, ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಹನುಮಂತು ಪುತ್ರನ ಚಿಕಿತ್ಸಾ ವೆಚ್ಚವನ್ನು ಭರಿಸುತ್ತೇನೆ’ ಎಂದು ಕುಮಾರಸ್ವಾಮಿ ಅಭಯ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರು ಹಾಜರಿದ್ದರು.
Next Story