ಲಂಚ ಸ್ವೀಕಾರ ಆರೋಪ: ಸಿಸಿಬಿ ಅಧಿಕಾರಿ ಅಜಯ್, ನಿರಂಜನ್, ಪ್ರಭುಶಂಕರ್ ಗೆ ಲೋಕಾಯುಕ್ತ ಕೋರ್ಟ್ ನಿಂದ ಜಾಮೀನು
ಬೆಂಗಳೂರು, ಮೇ.31: ಲಂಚ ಸ್ವೀಕಾರ ಪ್ರಕರಣದ ಆರೋಪಿಗಳಾದ ಸಿಸಿಬಿ ಇನ್ಸ್ಪೆಕ್ಟರ್ ಅಜಯ್, ನಿರಂಜನ್ ಕುಮಾರ್, ಎಸಿಪಿ ಪ್ರಭುಶಂಕರ್ ಗೆ ನಗರದ ಲೋಕಾಯುಕ್ತ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಅಧಿಕಾರಿಗಳು ಎಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಸಿಗರೇಟ್ ವಿತರಕರು ಹಾಗೂ ನಕಲಿ ಮಾಸ್ಕ್ ತಯಾರಕರಿಂದ ಲಂಚ ಪಡೆದ ಕುರಿತು ತನಿಖಾಧಿಕಾರಿಗಳು ಎಸಿಪಿ ಅವರನ್ನು ಪ್ರಶ್ನಿಸಿದರು.
ಕಳೆದ ವಾರ ಪ್ರಭುಶಂಕರ್ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿದ ಡೈರಿಯಲ್ಲಿರುವ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅದರಲ್ಲಿರುವ ಕೆಲ ಹೆಸರುಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ತಮ್ಮ ವಿರುದ್ಧ ಎಸಿಬಿಯಲ್ಲಿ ಹಾಗೂ ಕಾಟನ್ಪೇಟೆ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಎಸಿಪಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
Next Story