ಲಂಚ ಸ್ವೀಕಾರ ಆರೋಪ: ಎಸಿಪಿ ಪ್ರಭುಶಂಕರ್ ವಿರುದ್ಧದ ಸುಲಿಗೆ ಪ್ರಕರಣ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು, ಜೂ.4: ಸಿಗರೇಟ್ ಮಾರಾಟಗಾರರಿಂದ ಹಣ ವಸೂಲಿ ಮಾಡಿದ ಆರೋಪ ಹೊತ್ತಿರುವ ಸಿಸಿಬಿ ಎಸಿಪಿ ಪ್ರಭುಶಂಕರ್ ವಿರುದ್ಧ ಕಾಟನ್ಪೇಟೆ ಪೊಲೀಸರು ದಾಖಲಿಸಿರುವ ಎರಡು ಎಫ್ಐಆರ್ ಕುರಿತ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಎಫ್ಐಆರ್ ಗಳನ್ನು ರದ್ದುಪಡಿಸಲು ಕೋರಿ ಪ್ರಭುಶಂಕರ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತು.
ಅರ್ಜಿದಾರರ ಪರ ಎ.ಎಸ್.ಪೊನ್ನಣ್ಣ ಅವರು ವಾದಿಸಿ, ಅರ್ಜಿದಾರರ ವಿರುದ್ಧ ದುರುದ್ದೇಶ ಮತ್ತು ದ್ವೇಷದಿಂದ ಸುಳ್ಳು ದೂರು ದಾಖಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಸಿಸಿಬಿ ಇನ್ಸ್ಪೆಕ್ಟರ್ ಗಳಾದ ಅಜಯ್ ಮತ್ತು ನಿರಂಜನಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಒಬ್ಬರು ಮಾತ್ರ ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story