ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪತ್ನಿಯನ್ನೇ ಕೊಲೆಗೈದ ವ್ಯಕ್ತಿ
ಬೆಂಗಳೂರು, ಜು.5: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಮಹಿಳೆಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ಇಲ್ಲಿನ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಗುಡಿ ಹೋಬಳಿ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾಕಮ್ಮ ಯಾನೆ ಸಾವಿತ್ರಿ (26) ಮೃತ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
8 ವರ್ಷಗಳ ಹಿಂದೆ ಬೀರಹಳ್ಳಿ ಗ್ರಾಮದ ನರಸಿಂಹಮೂರ್ತಿ ಎಂಬಾತನೊಂದಿಗೆ ಸಾಕಮ್ಮ ಅವರಿಗೆ ವಿವಾಹವಾಗಿತ್ತು. ಇವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಳಗ ನಡೆಯುತ್ತಿದ್ದವು. ಇತ್ತೀಚಿಗೆ ಪತಿಯಿಂದ ಬೇಸತ್ತು ಸಾಕಮ್ಮ ತನ್ನ ತವರು ಮನೆಗೆ ಬಂದಿದ್ದಾಳೆ. ಇದನ್ನೇ ನೆಪವಾಗಿಟ್ಟುಕೊಂಡು ಪತ್ನಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಪ್ರಾಥಮಿಕ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Next Story