ದರೋಡೆಗೆ ಸಂಚು ಆರೋಪ: 6 ಮಂದಿ ಬಂಧನ
ಬೆಂಗಳೂರು, ಜೂ.27: ದರೋಡೆಗೆ ಹೊಂಚು ಹಾಕುತ್ತಿದ್ದ 6 ಮಂದಿಯನ್ನು ಇಲ್ಲಿನ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳು ದಿಲೀಪ್ ಕುಮಾರ್, ಬಾಲಾಜಿ, ಮಂಜುನಾಥ್, ಜಗದೀಶ್, ಮೈಲಾರಿ, ಅಭಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೋಹಳ್ಳಿ-ಬೈಯಂಡಹಳ್ಳಿ ರಸ್ತೆಯ ಮುನೇಶ್ವರ ದೇವಸ್ಥಾನದ ಬಳಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದ್ದು, ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story