ರವಿವಾರ ಲಾಕ್ಡೌನ್ಗೆ ವಿನಾಯಿತಿ ಕೇಳಬೇಡಿ: ಭಾಸ್ಕರ್ ರಾವ್
ಬೆಂಗಳೂರು, ಜು.4: ರವಿವಾರ ಲಾಕ್ಡೌನ್ನಿಂದ ಯಾರು ಸಹ ವಿನಾಯಿತಿ ಕೇಳಬೇಡಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಬೆಂಗಳೂರು ಸಿಟಿಯಲ್ಲಿ ಲಾಕ್ಡೌನ್ ಶನಿವಾರ ರಾತ್ರಿ 8ಗಂಟೆಗೆ ಪ್ರಾರಂಭವಾಗಿ ಸೋಮವಾರ ಬೆಳಗ್ಗೆ 5ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಗೌರವಾನ್ವಿತ ನಾಗರಿಕರು, ಮನೆಯಲ್ಲಿಯೇ ಇರಬೇಕು. ಎಲ್ಲರ ಹಿತದೃಷ್ಟಿಯಿಂದ ಲಾಕ್ಡೌನ್ ಮಾಡಲಾಗುತ್ತಿರುವುದರಿಂದ ವಿನಾಯಿತಿಗಳನ್ನು ಕೇಳಬೇಡಿ. ನೀವು ಒಂದು ದಿನ ನಿಮ್ಮ ಕೆಲಸ ಮುಂದೂಡಿದರೆ ಯಾವುದೇ ನಷ್ಟವಾಗುವುದಿಲ್ಲ. ದಯವಿಟ್ಟು ನೀವೇ ಸ್ವಯಂ ಪ್ರೇರಿತವಾಗಿ ಸಹಕಾರ ನೀಡಿ ಎಂದು ತಿಳಿಸಿದ್ದಾರೆ.
Next Story