ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ
ಬೆಂಗಳೂರು, ಜು.21: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಘಟನೆ ಇಲ್ಲಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಡುಗೋಡಿ ಬಳಿಯ ನಿವಾಸಿ ಪರಮೇಶ್(39) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಪರಮೇಶ್, ಆಡುಗೋಡಿ ಬಳಿಯ ಪರಿಚಯಸ್ಥನಾದ ಅಬ್ದುಲ್ ವಾಸೀಂ ಎಂಬುವರ ಮನೆಯ ಬಳಿ ಬೀಡಿ ಸೇದಲು ಹೋಗಿದ್ದಾರೆ. ಇದನ್ನು ಅಬ್ದುಲ್ ವಾಸೀಂ ವಿರೋಧಿಸಿದಾಗ ಇಬ್ಬರ ನಡುವೆ ಜಗಳವಾಗಿ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಡುಗೋಡಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story