ಕೊರೋನದಿಂದ ಗುಣಮುಖರಾಗಿ ಪ್ಲಾಸ್ಮಾ ದಾನಕ್ಕೆ ಮುಂದಾದ ಪೊಲೀಸರು: ಡಿಐಜಿ ಪ್ರವೀಣ್ ಸೂದ್ ಮೆಚ್ಚುಗೆ
ಬೆಂಗಳೂರು, ಆ.2: ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಕ್ವಾರಂಟೈನ್ ಆಗಿದ್ದ ಪೊಲೀಸರೀಗ ಗುಣಮುಖರಾಗಿದ್ದು, ಅವರೇ ಇದೀಗ ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿದ್ದಾರೆ.
ಕೊರೋನ ಸೋಂಕು ದೃಢಪಟ್ಟವರೂ ನಮ್ಮಂತೆಯೇ ಗುಣಮುಖರಾಗಲಿ ಎಂಬ ಉದ್ದೇಶದಿಂದ ಪ್ಲಾಸ್ಮಾ ದಾನ ಮಾಡುತ್ತಿದ್ದು, ಅವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ರವಿವಾರ ಟ್ವೀಟ್ ಮಾಡಿದ್ದಾರೆ.
ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಸ್ಟೇಬಲ್ ವೀರಭದ್ರಯ್ಯ ಅವರು ಕೊರೋನ ಸೋಂಕಿನಿಂದ ಗುಣಮುಖರಾದ ಬಳಿಕ ನಗರದ ಖಾಸಗಿ ಆಸ್ಪತ್ರೆ ಯೊಂದರಲ್ಲಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ. ಅವರು ಈ ಮೂಲಕ ನಮ್ಮ ಇಡೀ ಇಲಾಖೆ ಹೆಮ್ಮೆ ಪಡುವಂತೆ ಮಾಡಿದ್ದು, ಇನ್ನಷ್ಟು ಜನರು ಮುಂದೆ ಬರಲು ಅವರು ಪ್ರೇರಣೆಯಾಗಿದ್ದಾರೆ ಎಂದು ಡಿಐಜಿ ಸೂದ್ ಶ್ಲಾಘಿಸಿದ್ದಾರೆ.
Next Story