ಮುಖ್ಯಮಂತ್ರಿಗೆ ಕೊರೋನ ದೃಢ: ಪೊಲೀಸ್ ಆಯುಕ್ತ ಕಮಲ್ ಪಂತ್ ಕ್ವಾರಂಟೈನ್
ಬೆಂಗಳೂರು, ಆ.3: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಕಾರಣದಿಂದಾಗಿ ಪ್ರಾಥಮಿಕ ಸಂಪರ್ಕ ಹೊಂದಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೋಂ ಕ್ವಾರಂಟೈನ್ ಪ್ರಕ್ರಿಯೆಗೆ ಒಳಗಾಗಿದ್ದಾರೆ.
ಇತ್ತೀಚಿಗಷ್ಟೇ ಅಧಿಕಾರ ಸ್ವೀಕರಿಸಿದ ಕಮಲ್ ಪಂತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣ ಕಮಲ್ ಪಂತ್ ಐದು ದಿನ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಸಿಬ್ಬಂದಿ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
ಡಿಜಿ ಕ್ವಾರಂಟೈನ್: ಪೊಲೀಸ್ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಜ್ಯದ ವರದಿ ನೀಡಲು ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳುತ್ತಿದ್ದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಹ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಯಾರನ್ನೂ ಭೇಟಿಯಾಗದೆ ವಿಡಿಯೋ ಕಾನ್ಫ್ರೆನ್ಸ್ ಮೂಲಕವೇ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
Next Story