ಮಳೆ ಹಿನ್ನೆಲೆ: ಕ್ಷೇತ್ರ ಬಿಟ್ಟು ತೆರಳದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ
ಬೆಂಗಳೂರು, ಆ.6: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಕ್ಷೇತ್ರ ಬಿಟ್ಟು ಎಲ್ಲೂ ಹೋಗದೆ, ಸೂಕ್ತ ಮುಂಜ್ರಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸೂಚನೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು, ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.
ಈಗಾಗಲೇ 50 ಕೋಟಿ ರೂ. ಬಿಡುಗಡೆ ಮಾಡಿದ್ದು ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿ, ಅತಿ ತುರ್ತು ಕೆಲಸಗಳಿಗೆ ನೀವೇ ತೀರ್ಮಾನ ತೆಗೆದುಕೊಂಡು ಮುಂದುವರಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ನಿರ್ದೇಶನ ನೀಡಿದ್ದಾರೆ.
Next Story