ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕಾರ್ಮಿಕನ ಹತ್ಯೆ
ಬೆಂಗಳೂರು, ಆ.10: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಾರ್ಮಿಕನೋರ್ವನನ್ನು ಕೊಲೆಗೈದಿರುವ ಘಟನೆ ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾಗಿರುವ ಕಾರ್ಮಿಕನನ್ನು ಕಲಬುರಗಿ ಮೂಲದ ಸಿದ್ದರಾಮಪ್ಪ(22) ಎಂದು ಗುರುತಿಸಲಾಗಿದೆ.
ಮೃತ ಕಾರ್ಮಿಕ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಕಳೆದ ಎರಡು ದಿನ ಹಿಂದೆ ದುಷ್ಕರ್ಮಿಗಳ ತಂಡ, ಬೊಮ್ಮಸಂದ್ರ-ಜಿಗಣಿ ಹೊರವರ್ತುಲ ರಸ್ತೆಯ ರೂಪೇಶ್ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಾರ್ಮಿಕನನ್ನು ಜಿಗಣಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಪ್ರಕರಣ ಸಂಬಂಧ ಹೆಬ್ಬಗೋಡಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.
Next Story