ಬೆಂಗಳೂರು: ಎಟಿಎಂ ಒಡೆದು 27 ಲಕ್ಷ ರೂ. ದೋಚಿದ ಕಳ್ಳರು
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.10: ನಗರದ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ನಗದು ದೋಚಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ರವಿವಾರ ತಡರಾತ್ರಿ ಜನರ ಓಡಾಟವಿಲ್ಲದ ವೇಳೆ, ಎಟಿಎಂಗೆ ನುಗ್ಗಿ ಈ ಕೃತ್ಯವೆಸಗಿದ್ದು, ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ್ದಾರೆ ಎನ್ನಲಾಗಿದೆ.
ಸೋಮವಾರ ಮುಂಜಾನೆ ಎಟಿಎಂ ಕೇಂದ್ರದ ಬಳಿ ಸಾರ್ವಜನಿಕರು ಬಂದಾಗ ವಿಚಾರ ಗೊತ್ತಾಗಿದ್ದು, ಸದ್ಯ ಜಾಲಹಳ್ಳಿ ಇನ್ಸ್ಪೆಕ್ಟರ್ ಹಾಗೂ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಬ್ಯಾಂಕ್ನವರ ಹೇಳಿಕೆ ಹಾಗೂ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Next Story