ಪತ್ರಕರ್ತರ ಮೇಲಿನ ಹಲ್ಲೆಗೆ ಪ್ರೆಸ್ಕ್ಲಬ್ ಖಂಡನೆ: ಕ್ರಮಕ್ಕೆ ಒತ್ತಾಯ
ಬೆಂಗಳೂರು, ಆ.12: ನಗರದಲ್ಲಿ ಕಳೆದ ರಾತ್ರಿ ಕೆ.ಜಿ.ಹಳ್ಳಿ ಹಾಗೂ ಡಿ.ಜೆ. ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನು ವರದಿ ಮಾಡಲು ಹೋದ ಮಾಧ್ಯಮದವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದನ್ನು ಪ್ರೆಸ್ಕ್ಲಬ್ ಆಫ್ ಬೆಂಗಳೂರು ತೀವ್ರವಾಗಿ ಖಂಡಿಸಿದೆ.
ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು. ಪ್ರತಿ ಬಾರಿಯೂ ಇಂತಹ ಗಲಾಟೆ ನಡೆಯುವ ಸಂದರ್ಭದಲ್ಲಿ ಮಾಧ್ಯಮದವರ ಮೇಲೆ ಹಲ್ಲೆಯಾಗುತ್ತಿರುವುದು ನಿಜಕ್ಕೂ ಅತ್ಯಂತ ನೋವಿನ ವಿಷಯ.
ಇಂತಹ ಸಂದರ್ಭದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಸರಕಾರವನ್ನು ಹಿಂದೆ ಅನೇಕ ಭಾರಿ ಮನವಿ ಮಾಡಿದ್ದೇವೆ. ನಿಷ್ಪಕ್ಷವಾಗಿ ಕೆಲಸ ಮಾಡುವ ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಮತ್ತೊಮ್ಮೆ ಸರಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಪ್ರೆಸ್ಕ್ಲಬ್ ಪ್ರಕಟನೆ ತಿಳಿಸಿದೆ.
Next Story