ರಸ್ತೆಯಲ್ಲಿ ಚಾಪೆ ಹಾಸಿ ಮಲಗಿ ವಾಟಾಳ್ ಪ್ರತಿಭಟನೆ
ಕೊರೋನ ಸೋಂಕಿತರ ಪ್ರಾಣ ಉಳಿಸುವಲ್ಲಿ ಸರಕಾರ ವಿಫಲ: ಆರೋಪ
ಬೆಂಗಳೂರು, ಆ.19: ಕೊರೋನ ಸೋಂಕಿತರ ಪ್ರಾಣ ಉಳಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಬುಧವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಚಾಪೆ ಹಾಸಿ ಮಲಗಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಅವರು, ಕೊರೋನ ಸೋಂಕಿತರ ಪ್ರಾಣ ಉಳಿಸಿ ಎಂದು ಸರಕಾರಕ್ಕೆ ಆಗ್ರಹಿಸಿದರು.
ಕೊರೋನ ಸೋಂಕು ತಡೆಯುವಲ್ಲಿ ಸರಕಾರ ವಿಫಲವಾಗಿದೆ. ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಸರಕಾರದ ಮಾತು ಕೇಳುತ್ತಿಲ್ಲ. ಕೂಡಲೇ ಸರಕಾರ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Next Story