ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ಗೆ ಮತ್ತೊಮ್ಮೆ ಸಿಸಿಬಿ ನೋಟಿಸ್
ಬೆಂಗಳೂರು, ಸೆ.17: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ ಮೇಯರ್ ಸಂಪತ್ ರಾಜ್ಗೆ ಸಿಸಿಬಿ ಎರಡನೆ ಬಾರಿಗೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಬುಧವಾರ ನೋಟಿಸ್ ನೀಡಲು ಅವರ ನಿವಾಸದ ಬಳಿ ಸಿಸಿಬಿ ಪೊಲೀಸರು ಹೋಗಿದ್ದರು. ಆದರೆ, ಸಂಪತ್ ರಾಜ್ ಮನೆಯಲ್ಲಿ ಇಲ್ಲದ ಕಾರಣಕ್ಕೆ ವಾಪಸ್ ಬಂದು ವಾಟ್ಸ್ ಆ್ಯಪ್ ಮೂಲಕ ನೋಟಿಸ್ ಕಳುಹಿಸಿದ್ದರು. ನೋಟಿಸ್ ನೀಡಿದ್ದರೂ ಸಂಪತ್ ರಾಜ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗುತ್ತಿದೆ.
ಗೈರಾಗುವ ಸಾಧ್ಯತೆ: ಸೆ.18ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ನಲ್ಲಿ ಉಲ್ಲೇಖಿಸಿದೆ. ಆದರೆ, ಸಂಪತ್ ರಾಜ್ ಅವರಿಗೆ ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ವಿಚಾರಣೆಗೆ ಗೈರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Next Story