ಬೆಟ್ಟಿಂಗ್ ದಂಧೆ ಆರೋಪ: ಮೂವರ ಸೆರೆ
ಬೆಂಗಳೂರು, ಅ.1: ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದಡಿ ಮೂವರನ್ನು ಇಲ್ಲಿನ ದೊಡ್ಡಬಳ್ಳಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚನ್ನಕೃಷ್ಣ, ಹರೀಶ್ ಮತ್ತು ಶಶಿಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಕೆಕೆಆರ್ ಮತ್ತು ರಾಜಸ್ತಾನ್ ರಾಯಲ್ಸ್ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿಯ ತೋಟದ ಮನೆಯಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 18,700 ರೂ. ಮತ್ತು ಒಂದು ಟಿವಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Next Story