ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಸರಿಯಲ್ಲ: ಶೆಟ್ಟರ್
ಬೆಂಗಳೂರು, ಸೆ.12: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಿಜವಾಗಿಯೂ ಅನ್ಯಾಯ ಆಗಿರುವುದು ನಮಗೆ. ಆದರೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದು ಸರಿಯಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ನಮ್ಮ ರೈತರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ನೀರು ತೆಗೆದುಕೊಂಡ ತಮಿಳುನಾಡು ಕನ್ನಡಿಗರ ಮೇಲೆ ದೌರ್ಜನ್ಯ ಮಾಡುತ್ತಿರುವುದು ಸರಿಯಲ್ಲ. ಇದರ ಪರಿಣಾಮ ರಾಜ್ಯದ ಮೇಲೆ ಬೀಳುತ್ತದೆ. ಹೀಗಾಗಿ ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ರಕ್ಷಣೆ ನೀಡಬೇಕು ಎಂದು ಹೇಳಿದರು.
ಬೆಂಗಳೂರಿನಲ್ಲಿ ತಮಿಳಿಗರು ಹೆಚ್ಚಾಗಿದ್ದಾರೆ. ಇದರ ಬಗ್ಗೆ ತಮಿಳುನಾಡು ಸರಕಾರ ಗಮನಿಸಬೇಕು. ತಮಿಳುನಾಡು ಸಿಎಂ ಜಯಲಲಿತಾ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು
Next Story