ಸಂಸದ ಡಿ.ಕೆ.ಸುರೇಶ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯಿಂದ ಮುಖ್ಯಮಂತ್ರಿಗೆ ದೂರು
ಬೆಂಗಳೂರು, ಸೆ.14: ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಹಿಳೆಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ರಾಜರಾಜೇಶ್ವರಿ ನಗರದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತೆ ಶಶಿಕಲಾ ದೂರು ನೀಡಿದ ಮಹಿಳೆಯಾಗಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿ ಸಂಸದ ಡಿ.ಕೆ.ಸುರೇಶ್ ತಮಗೆ ಕಿರುಕುಳ ನೀಡುತ್ತಿರುವುದಾಗಿ ಶಶಿಕಲಾ ಮುಖ್ಯಮಂತ್ರಿಯೆದುರು ಅಳಲು ತೋಡಿಕೊಂಡಿದ್ದಾರೆ.
ಭೂ ವಿವಾದಕ್ಕೆ ಸಂಬಂಧಿಸಿ ತಮ್ಮ ಕುಟುಂಬದ ಸದಸ್ಯರೆಲ್ಲರನ್ನು ಪೊಲೀಸರು ಬಂಧಿಸಿದ್ದಾರೆ ಇದಕ್ಕೆ ಡಿ.ಕೆ.ಸುರೇಶ್ ಕಾರಣ ಎಂದವರು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಲು ಶಶಿಕಲಾ ನಿರಾಕರಿಸಿದ್ದಾರೆ.
Next Story