ಫೆ.25ರಂದು ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮನ
ಮಂಗಳೂರು, ಫೆ.23: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಫೆ.25ರಂದು ಮಂಗಳೂರಿಗೆ ಆಗಮಿಸಲಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸಿ ಪೂ.11ಕ್ಕೆ ನಗರದ ಅತ್ತಾವರ ರಸ್ತೆಯ ಐಎಂಎ ಹಾಲ್ನಲ್ಲಿ ನಡೆಯುವ 'ವಾರ್ತಾಭಾರತಿ'ಯ ನೂತನ ಕಚೇರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಪರಾಹ್ನ 3ಕ್ಕೆ ಪುರಭವನದಲ್ಲಿ ನಡೆಯುವ ಎ.ಕೆ.ಜಿ. ಬೀಡಿ ಕಾರ್ಮಿಕರ ಸಹಕಾರಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ, 3:30ಕ್ಕೆ ನೆಹರು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 5:45ಕ್ಕೆ ಮಂಗಳೂರಿನಿಂದ ರೈಲಿನ ಮೂಲಕ ತಿರುವನಂತಪುರಂಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story