‘ನಮ್ಮ ಕ್ಯಾಂಟೀನ್’ ಇನ್ಮುಂದೆ ‘ಇಂದಿರಾ ಗಾಂಧಿ ಕ್ಯಾಂಟೀನ್’
ಶಾಸಕಾಂಗ ಸಭೆಯ ಒತ್ತಾಯಕ್ಕೆ ಸಿಎಂ ಸಮ್ಮತಿ
ಬೆಂಗಳೂರು, ಮಾ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯು ಇದೀಗ ಆರಂಭಗೊಂಡಿದೆ. ಸಭೆಯಲ್ಲಿ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ‘ನಮ್ಮ ಕ್ಯಾಂಟೀನ್’ಗೆ ‘ನಮ್ಮ ಇಂದಿರಾ ಗಾಂಧಿ ಕ್ಯಾಂಟೀನ್’ ಎಂದು ಹೆಸರಿಡುವಂತೆ ಕಾಂಗ್ರೆಸ್ ಶಾಸಕರು ಒತ್ತಾಯಿಸಿದರು. ವಿಷಯ ಪ್ರಸ್ತಾಪಿಸಿದ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ನಮ್ಮ ಕ್ಯಾಂಟೀನ್ಗೆ ಇಂದಿರಾ ಗಾಂಧಿಯವರ ಹೆಸರಿಡಲು ಒತ್ತಾಯಿಸಿದರು. ಇದಕ್ಕೆ ಮುಖ್ಯಮಂತ್ರಿ ಸಮ್ಮತಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಬಿಜೆಪಿಯವರು ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಅದಕ್ಕೆ ಅವಕಾಶ ಕಲ್ಪಿಸದಂತೆ ಕಾಂಗ್ರೆಸ್ ಶಾಸಕರು ಒತ್ತಾಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಸೌಲಭ್ಯಗಳ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡುವಂತೆಯೂ ಶಾಸಕರು ಸಲಹೆ ನೀಡಿದರು.
ಬಳಿಕ ಸಭೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಚರ್ಚೆ ಮುಂದುವರಿದಿದೆ.
Next Story