ಹಿರಿಯ ಪತ್ರಕರ್ತ ಉಮಾಪತಿಗೆ ಕಸಾಪ ದತ್ತಿ ಪ್ರಶಸ್ತಿ
ಬೆಂಗಳೂರು, ಎ. 20: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ನಾಗಡಿಕೆ-ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ’ಯನ್ನು ಹಿರಿಯ ಪತ್ರಕರ್ತ ಡಿ.ಉಮಾಪತಿಗೆ ಹಾಗೂ ‘ಪಂಕಜಶ್ರೀ ದತ್ತಿ ಸಾಹಿತ್ಯ ಪ್ರಶಸ್ತಿ’ಯನ್ನು ಲೇಖಕಿ ಡಾ.ಎಚ್.ಎಲ್.ಪುಷ್ಪಾ ರಿಗೆ ನೀಡಲಾಗುತ್ತಿದೆ.
ನಿರ್ಭಯವಾಗಿ, ಯಾವ ಆಮಿಷಗಳಿಗೂ ಒಳಗಾಗದೆ ನಿಷ್ಪಕ್ಷವಾದ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನಾಗಡಿಕೆ-ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸುವ ಉದ್ದೇಶದಿಂದ ಪಂಕಜಶ್ರೀ ದತ್ತಿ ಸಾಹಿತ್ಯ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 10 ಸಾವಿರ ರೂ. ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕಸಾಪ ಪ್ರಕಟನೆ ತಿಳಿಸಿದೆ.
Next Story