ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ
ಬೆಂಗಳೂರು, ಎ.30: ನಾಲ್ಕು ದಿನದ ಯುಎಇ ಪ್ರವಾಸ ಮುಗಿಸಿ ಬೆಂಗಳೂರಿಗೆ ನಿರ್ಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುಬೈಯಲ್ಲಿ ಅಲ್ ಫಲಾಹ್ ಗ್ರೂಪ್ ವತಿಯಿಂದ ರವಿವಾರ ಮಧ್ಯಾಹ್ನ ಆತ್ಮೀಯವಾಗಿ ಬೀಳ್ಕೊಡಲಾಯಿತು.
ದುಬೈ ಹಾಗೂ ಅಬುದಾಬಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎ.27ರಂದು ದುಬೈಗೆ ತೆರಳಿದ್ದ ಸಿದ್ದರಾಮಯ್ಯ ರವಿವಾರ ದುಬೈಯಿಂದ ಮಧ್ಯಾಹ್ನ 1.45ರ ಎಮಿರೇಟ್ಸ್ ವಿಮಾನ ಹತ್ತಿದ್ದಾರೆ. ಸಂಜೆ 7.15ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ.
ಮುಖ್ಯಮಂತ್ರಿಯನ್ನು ಬೀಳ್ಕೊಡುವ ಸಂದರ್ಭದಲ್ಲಿ ಕರ್ನಾಟಕ ಅನಿವಾಸಿ ಭಾರತೀಯರ ಫೋರಂನ ಉಪಾಧ್ಯಕ್ಷೆ ಡಾ.ಆರತಿಕೃಷ್ಣ, ಮಂಗಳೂರು ಶಾಸಕ ಮೊಯ್ದಿನ್ ಬಾವಾ, ಎಂ.ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ, ದುಬೈ ಬಿಸಿಎಫ್ ಅಧ್ಯಕ್ಷ ಡಾ.ಯೂಸುಫ್, ಆಸಿಫ್ ಅಲ್ ಫಲಾಹ್ ಈ ಸಂದರ್ಭ ಉಪಸ್ಥಿತರಿದ್ದರು. ಕೋಟು ಸೂಟಿನೊಂದಿಗೆ ದುಬೈಗೆ ತೆರಳಿದ್ದ ಸಿದ್ದರಾಮಯ್ಯ ಅದೇ ಧಿರಿಸಲ್ಲಿ ಬೆಂಗಳೂರಿಗೆ ಹಿಂದಿರುಗಿದ್ದಾರೆ.
Next Story