ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಆಯ್ಕೆಯಾಗದೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು, ಮೇ 3: ಕಾಲೇಜು ಮಟ್ಟದ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಕೆಲಸ ಸಿಗಲಿಲ್ಲ ಎಂದು ಮನನೊಂದ ಬಿಇ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬನಶಂಕರಿ 3ನೆ ಹಂತದ ದ್ವಾರಕಾನಗರ ನಿವಾಸಿ ಅರ್ಪಿತ್(22) ಆತ್ಮಹತ್ಯೆ ಮಾಡಿಕೊಂಡಿರುವ ಬಿಇ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.
ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಅರ್ಪಿತ್ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಆಯ್ಕೆಯಾಗಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ಮಂಗಳವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಗಿರಿನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Next Story