ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಪ್ರಕರಣ: ಕಿರುತೆರೆ ನಟಿ ಬಂಧನ
ಬೆಂಗಳೂರು, ಮೇ 29: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಕೊಲೆಗೈದಿರುವ ಪ್ರಕರಣ ಸಂಬಂಧ ಕಿರುತೆರೆ ನಟಿ ಹಾಗೂ ಈಕೆಯ ಪ್ರಿಯಕರನನ್ನು ಇಲ್ಲಿನ ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡದ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಕಿರುತೆರೆ ನಟಿ ಕಲ್ಪನಾ ಹಾಗೂ ಈಕೆಯ ಪ್ರಿಯಕರ ಜಾವೇದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜಾವೇದ್ ನೊಂದಿಗೆ ಕಲ್ಪನಾ ಅಕ್ರಮ ಸಂಬಂಧ ಹೊಂದಿದ್ದ ಬಗ್ಗೆ ಪತಿ ಸತೀಶ್ ಪ್ರಶ್ನಿಸಿದ್ದರು. ಇದರಿಂದ ಕುಪಿತಗೊಂಡ ಆಕೆ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೆ ಹೊಂಚು ಹಾಕಿದ್ದರು ಎನ್ನಲಾಗಿದೆ.
ರಾತ್ರಿ ಊಟಕ್ಕೆ ನಿದ್ರೆ ಮಾತ್ರೆ ಹಾಕಿ ಸತೀಶ್ನನ್ನು ಮಲಗಿಸಿದ್ದ ಕಲ್ಪನಾ ನಂತರ ಜಾವೇದ್ನನ್ನು ಮನೆಗೆ ಕರೆಸಿದ್ದಾಳೆ. ನಂತರ ಇಬ್ಬರು ಸೇರಿ ಸುತ್ತಿಗೆಯಿಂದ ತಲೆಗೆ ಹೊಡೆದು ಸತೀಶ್ನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಯಶವಂತಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story