ಮರಕ್ಕೆ ಢಿಕ್ಕಿಯಾದ ಕಾರು: ಇಬ್ಬರು ಮೃತ್ಯು
ಸಾಗರ, ಜೂ. 23: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಇಬ್ಬರು ಮೃತಪಟ್ಟ ಘಟನೆ ಇಲ್ಲಿನ ಹುಲಿದೇವರಬನ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ನಿವಾಸಿ ಆದರ್ಶ್ (30) ಎಂದು ಗುರುತಿಸಲಾಗಿದ್ದು, ಮತ್ತೋರ್ವರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story