ಪೇದೆ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಬಂಧನ
ಬೆಂಗಳೂರು, ಆ.13: ಮದ್ಯದ ಅಮಲಿನಲ್ಲಿ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋದಪ ಮೇಲೆ ನಾಲ್ವರನ್ನು ಇಲ್ಲಿನ ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ವಿವೇಕನಗರದ ಶಿವರಾಜ್, ಕುಮಾರ್, ಜಗನ್ನಾಥ್ ಹಾಗೂ ಮುನಿರಾಜು ಬಂಧಿತ ಆರೋಪಿಗಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳು ವಿವೇಕನಗರ ಮುಖ್ಯರಸ್ತೆಯಲ್ಲಿ ಶನಿವಾರ ಮದ್ಯ ಸೇವಿಸಿ ಸಾರ್ವಜನಿಕರೊಂದಿಗೆ ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದ ಪೇದೆ ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಮದ್ಯದ ಅಮಲಿನಲ್ಲಿದ್ದ ನಾಲ್ವರನ್ನು ಠಾಣೆ ಕರೆದುಕೊಂಡು ಹೋಗಿ ವಿಚಾರಣೆಗೊಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story