ಕ್ರಿಮಿನಾಶಕ ಸೇವಿಸಿ ನವವಿವಾಹಿತೆ ಆತ್ಮಹತ್ಯೆ
ಬೆಂಗಳೂರು, ಸೆ.24: ಕ್ರಿಮಿನಾಶಕ ಸೇವಿಸಿ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ತಿರುಮಲಾಪುರದಲ್ಲಿ ನಡೆದಿದೆ.
ತಿರುಮಲಾಪುರದ ನೇತ್ರಾವತಿ(22) ಆತ್ಮಹತ್ಯೆಗೆ ಮಾಡಿಕೊಂಡವರೆಂದು ತಿಳಿದು ಬಂದಿದೆ.
ಕಳೆದ ಸೆ.22ರ ಮಧ್ಯಾಹ್ನ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನೇತ್ರಾವತಿಯನ್ನು ನಗರದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನೇತ್ರಾವತಿ ಸೆ.24ರ ಬೆಳಗ್ಗೆ ಮೃತಪಟ್ಟಿದ್ದಾರೆ.
ರೇಣುಕೇಶ್ ಮತ್ತು ನೇತ್ರಾವತಿ ಇಬ್ಬರೂ ಪರಸ್ಪರ ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಮೂರು ತಿಂಗಳು ಹಿಂದೆ ಮದುವೆಯಾಗಿದ್ದರು. ವರದಕ್ಷಿಣೆ ಕಿರುಕುಳ ತಾಳಲಾರದೆ ನಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ನೇತ್ರಾವತಿ ಪೋಷರು ಆರೋಪಿಸಿ ದೂರು ನೀಡಿದ್ದಾರೆ.
ಈ ಮೊಕದ್ದಮೆ ದಾಖಲಿಸಿಕೊಂಡಿರುವ ನೆಲಮಂಗಲ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story