ಕೆಪಿಸಿಸಿ ಕಾನೂನು ಘಟಕದ ಉಪಾಧ್ಯಕ್ಷರಾಗಿ ಪ್ರಫುಲ್ಲಕುಮಾರ್ ನೇಮಕ
ಬೆಂಗಳೂರು, ಅ. 12: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಶಿಫಾರಸನ್ನು ಆಧರಿಸಿ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಉಪಾಧ್ಯಕ್ಷರನ್ನಾಗಿ ಎಂ.ಪ್ರಫುಲ್ಲಕುಮಾರ್ ಅವರನ್ನು ತಕ್ಷಣದಿಂದಲೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕೂಡಲೇ ಅಧಿಕಾರ ವಹಿಸಿಕೊಂಡು, ಪಕ್ಷದ ಮುಖಂಡರ ಮಾರ್ಗದರ್ಶನ, ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಪಕ್ಷ ಸಂಘಟನೆಗೆ ಶ್ರಮಿಸಬೇಕೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ ಪ್ರಕಟನೆಯಲ್ಲಿ ಸೂಚಿಸಿದ್ದಾರೆ.
Next Story