ವರದಿ ಬಳಿಕ ಕಾರಣ ತಿಳಿಯಲಿದೆ: ಪೊಲೀಸ್ ಆಯುಕ್ತ ಸುನೀಲ್ ಕುಮಾರ್
ಕಟ್ಟಡ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟ ಪ್ರಕರಣ
ಬೆಂಗಳೂರು, ಅ.17: ಈಜಿಪುರದ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಅಗ್ನಿಶಾಮಕ ದಳ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿಗಳು ಬಂದ ನಂತರವಷ್ಟೆ ನಿಖರವಾದ ಕಾರಣ ತಿಳಿದು ಬರಲಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿರಬಹುದು ಅಥವಾ ಇದು ಹಳೆಯ ಕಟ್ಟಡವಾಗಿರುವುದರಿಂದ ಕುಸಿದಿರಬಹುದು ಎಂಬ ಕಾರಣಗಳು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ವಿವೇಕ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಟ್ಟಡ ಕುಸಿತದಿಂದಾಗಿ ಏಳು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲಕ ಗುಣೇಶ್ನನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ ಎಂದರು.
Next Story