ಎಚ್ಡಿಕೆ ಚುನಾವಣೆ ಪ್ರಚಾರಕ್ಕೆ ವಿಶೇಷ ಬಸ್
ಬೆಂಗಳೂರು, ಅ. 18: ಇತ್ತೀಚೆಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ನ.1ರಿಂದ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಚುನಾವಣೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್ ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಹೈಟೆಕ್ ಬಸ್ ಸಜ್ಜುಗೊಳಿಸಿದೆ. ನವೆಂಬರ್ನಿಂದ ಕುಮಾರಸ್ವಾಮಿ ಪಕ್ಷದ ಕಾರ್ಯಕ್ರಮಗಳಲ್ಲಿ ಎಂದಿನಂತೆ ಪಾಲ್ಗೊಳ್ಳುವುದಲ್ಲದೆ, ಪ್ರವಾಸ ಕಾರ್ಯಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.
ಸುಮಾರು 1ಕೋಟಿ ರೂ.ವೆಚ್ಚದಲ್ಲಿ ಅತ್ಯಾಧುನಿಕ ಬಸ್ನ್ನು ಸಜ್ಜುಗೊಳಿಸಲಾಗಿದೆ. ಈ ಬಸ್ಸಿನಲ್ಲಿ ಹೈಡ್ರಾಲಿಕ್ ಲಿಫ್ಟ್, ಅಡುಗೆ ಕೋಣೆ, ಶೌಚಾಲಯ, ಸಭಾಂಗಣ, ಮಲಗುವ ಕೋಣೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಇರಲಿವೆ ಎಂದು ತಿಳಿದು ಬಂದಿದೆ.
Next Story