ಸುಶಾಂತ್ ಸಿಂಗ್ ಮರಣೋತ್ತರ ವರದಿ ನೀಡಿದ ವೈದ್ಯರು
ಮುಂಬೈ : ರವಿವಾರ ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಪರೀಕ್ಷೆ ಮುಂಬೈಯ ಕೂಪರ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಅವರು ನೇಣು ಬಿಗಿದಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.
ಸುಶಾಂತ್ ಅವರು ಕಳೆದ ಆರು ತಿಂಗಳುಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರೆಂದು ತಿಳಿದು ಬಂದಿದೆ.
ಇಂದು ಸುಶಾಂತ್ ಅವರ ಅಂತ್ಯಕ್ರಿಯೆ ನಡೆಯಲಿರುವುದರಿಂದ ಪಾಟ್ನಾದಿಂದ ಅವರ ಕುಟುಂಬ ಸದಸ್ಯರು ಕಳೆದ ರಾತ್ರಿ ಮುಂಬೈಗೆ ಆಗಮಿಸಿದ್ದಾರೆ. ಬಾಲಿವುಡ್ನ ಈ ಪ್ರತಿಭಾನ್ವಿತ ನಟನ ಆತ್ಮಹತ್ಯೆ ಚಿತ್ರರಂಗ ಮಾತ್ರವಲ್ಲದೆ ಇಡೀ ದೇಶವನ್ನೇ ಆಘಾತಗೊಳಿಸಿದೆ.
Next Story