ಕಾಸರಗೋಡು: ಮರಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಲಾರಿ; ಚಾಲಕ ಮೃತ್ಯು
ಕಾಸರಗೋಡು, ಜು.29: ಸರಕು ಸಾಗಾಟ ಮಾಡುತ್ತಿದ್ದ ಲಾರಿಯಿಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಶುಕ್ರವಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಟಿಯಲ್ಲಿ ನಡೆದಿದೆ.
ಘಟನೆಯ ಪರಿಣಾಮ ಲಾರಿ ಚಾಲಕ ಮಹಾರಾಷ್ಟ್ರದ ಸುನಿಲ್ ಮೃತಪಟ್ಟಿದ್ದು, ಕ್ಲೀನರ್ ಲಕ್ಷ್ಮಣ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು , ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಚ್ಚಿಯಿಂದ ಗುಜರಾತ್ಗೆ ಟಯರ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ಅಪಘಾತ ನಡೆದಿದೆ ಎನ್ನಲಾಗಿದೆ. ಮಗುಚಿ ಬಿದ್ದ ಲಾರಿಯನ್ನು ಕ್ರೇನ್ ಬಳಸಿ ಮೇಲಕ್ಕೆತ್ತಿ, ಲಾರಿಯಡಿ ಸಿಲುಕಿದ್ದ ಇಬ್ಬರನ್ನು ಹೊರತೆಗೆಯಲಾಯಿತು ಎಂದು ತಿಳಿದುಬಂದಿದೆ.
ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story