ಬಹ್ರೈನ್: ಐಎಫ್ಎಫ್ನಿಂದ ‘ದ್ವೇಷ ರಾಜಕೀಯ ನಿಲ್ಲಿಸಿ’ ಅಭಿಯಾನದ ಉದ್ಘಾಟನೆ
ಬಹ್ರೈನ್, ಸೆ.11: ಇಂಡಿಯನ್ ಫ್ರೆಟರ್ನಿಟಿ ಫೋರಮ್ ಬಹರೈನ್ ಕರ್ಣಾಟಕ ಘಟಕ ಹಮ್ಮಿಕೊಂಡಿದ್ದ ‘ದ್ವೇಷ ರಾಜಕೀಯ ನಿಲ್ಲಿಸಿ’ ಅಭಿಯಾನದ ಉದ್ಘಾಟನಾ ಸಮಾರಂಭವು ಬಹ್ರೈನ್ನ ಹಮ್ಮದ್ ಟೌನ್ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಂಡಿಯನ್ ಫ್ರೆಟರ್ನಿಟಿ ಫೋರಮ್ ಕರ್ನಾಟಕ ಘಟಕ ಅಧ್ಯಕ್ಷ ಮುಹಮ್ಮದ್ ಇರ್ಷಾದ್ ತುಂಬೆ, ಭಾರತದಲ್ಲಿ ಅಲ್ಪಸಂಖ್ಯಾತ, ದಲಿತ ಮತ್ತು ಹಿಂದುಳಿದ ವರ್ಗದ ಜನರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಆಡಳಿತರೂಢ ಪಕ್ಷಗಳು ಮಾತ್ರ ತಲೆಕೆಡಿಸಿಕೊಳ್ಳದೆ ದ್ವೇಷಪೂರಿತ ಹೇಳಿಕೆಯನ್ನು ನೀಡುತ್ತಾ ಜನರ ಮಧ್ಯೆ ದ್ವೇಷವನ್ನು ಬಿತ್ತುತ್ತಿವೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಯಾವುದೇ ಕಠಿಣ ಕ್ರಮಕೈಗೊಳ್ಳದೆ ತಾರತಮ್ಯ ನೀತಿಯನ್ನು ಅನುಸರಿಸುತ್ತಿವೆ. ಈ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸವನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಮಾಡಬೇಕಾಗಿದೆ ಎಂದು ಹೇಳಿದರು.
ಭಾರತದ ಪ್ರಸಕ್ತ ಸನ್ನಿವೇಶದ ಕುರಿತು ಚರ್ಚಿಸಲಾಯಿತು. ಇಂಡಿಯನ್ ಫ್ರೆಟರ್ನಿಟಿ ಫೋರಮ್ ಕರ್ನಾಟಕ ಘಟಕ ಕಾರ್ಯದರ್ಶಿ ಮುಹಮ್ಮದ್ ಅಥಾವುಲ್ಲ ಸುಳ್ಯ ಸಂವಾದದಲ್ಲಿ ಪಾಲ್ಗೊಂಡರು. ಆಸಿಫ್ ಬಿ.ಸಿ.ರೋಡ್ ಸ್ವಾಗತಿಸಿದರು, ನಿಝಾಂ ನಿಜ್ಜು ಮಂಗಳೂರು ವಂದಿಸಿದರು.