ಮುಖ್ಯಮಂತ್ರಿಯಿಂದ ಮಾದಕ ದ್ರವ್ಯ ವಿರೋಧಿ ಅಭಿಯಾನಕ್ಕೆ ಚಾಲನೆ
ಮಂಗಳೂರು, ಅ. 23: ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅ.24ರಿಂದ ನ.10 ರವರೆಗೆ ನಡೆಯಲಿರುವ ಮಾದಕ ದ್ರವ್ಯ ವಿರೋಧಿ ಅಭಿಯಾನದ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಟ್ವಾಳದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಚಿವರಾದ ಎಚ್.ಸಿ. ಮಹದೇವಪ್ಪ, ಡಿ.ಕೆ. ಶಿವಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಹಾಜಿ ಬಿ.ಎಚ್. ಖಾದರ್, ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷಅಬ್ದುಲ್ಲಾ ಬಿನ್ನು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಹಮ್ಮದ್ ಸವಾದ್, ಮುಹಮ್ಮದ್ ಅವುಫ್, ರಾಜ್ಯ ಪ್ರಧಾನ ಕಾರ್ಯದರ್ಶಿ ರೂಪೇಶ್ ರೈ, ಕಾರ್ಯದರ್ಶಿ ಫಾರೂಕ್ ಹಾಗೂ ಆಸ್ಟನ್ ಸಿಕ್ವೇರಾ, ಶೌಹಾದ್ ಗೂನಡ್ಕ, ರುಷೈದ್, ಸುಹಾನ್ ಆಳ್ವ, ಸಿರಾಜ್ ಗುದುರು ಮೊದಲಾದವರು ಉಪಸ್ಥಿತರಿದ್ದರು.
Next Story