Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವ...

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವ ಬಗ್ಗೆ ನಿರ್ಧರಿಸಿಲ್ಲ: ಡಾ. ರವೀಂದ್ರನಾಥ್ ಶ್ಯಾನ್‌ಭಾಗ್

ವಾರ್ತಾಭಾರತಿವಾರ್ತಾಭಾರತಿ30 Oct 2017 9:37 PM IST
share
ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವ ಬಗ್ಗೆ ನಿರ್ಧರಿಸಿಲ್ಲ: ಡಾ. ರವೀಂದ್ರನಾಥ್ ಶ್ಯಾನ್‌ಭಾಗ್

ಉಡುಪಿ, ಅ.30: ನಾಡಿನ ಸುಮಾರು 30ರಿಂದ 40ರಷ್ಟು ಹಿರಿಯ ನಾಗರಿಕರ ಕಣ್ಣೀರ ಕಥೆಗಳು ನನ್ನ ಬಳಿ ಇರುವಾಗ, ಅವರಿಗೆ ನ್ಯಾಯ ದೊರಕಿಸಲು ಸಾಧ್ಯವಾಗದೇ ಅಸಹಾಯಕನಾಗಿರುವಾಗ ರಾಜ್ಯ ಪ್ರಶಸ್ತಿಯನ್ನು ನಾನು ಹೇಗೆ ಸ್ವೀಕರಿಸಲಿ. ಹೀಗಾಗಿ ರಾಜ್ಯ ಸರಕಾರ ನೀಡಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸುವ ಬಗ್ಗೆ ನಾನು ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಇಂದು ಪ್ರಕಟವಾದ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಸಮಾಜಸೇವಾ ಕ್ಷೇತ್ರಕ್ಕಾಗಿ ಪ್ರತಿಷ್ಠಿತ ಪ್ರಶಸ್ತಿ ಪಡೆದಿರುವ ಜಿಲ್ಲೆಯ ಹಿರಿಯ ಮಾನವ ಹಕ್ಕುಗಳ ಹಾಗೂ ಗ್ರಾಹಕ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ್ ಶ್ಯಾನ್‌ಭಾಗ್ ತಿಳಿಸಿದ್ದಾರೆ.

‘ರಾಜ್ಯೋತ್ಸವ’ ಪ್ರಶಸ್ತಿಗಾಗಿ ಅಭಿನಂದಿಸಿ ಅವರ ಪ್ರತಿಕ್ರಿಯೆಗಾಗಿ ಪತ್ರಿಕೆ ಡಾ. ಶ್ಯಾನ್‌ಭಾಗ್‌ರನ್ನು ಸಂಪರ್ಕಿಸಿದಾಗ, ತಾನಿನ್ನೂ ಪ್ರಶಸ್ತಿ ಸ್ವೀಕರಿಸುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು. ಪ್ರಶಸ್ತಿಯ ಕುರಿತಂತೆ ನನಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸರಕಾರದಿಂದ ಯಾರೂ ನನಗೆ ಈ ವಿಷಯ ತಿಳಿಸಿಲ್ಲ. ಹೀಗಾಗಿ ನಾಳೆ ಈ ಬಗ್ಗೆ ಮಾಹಿತಿ ಬಂದ ಬಳಿ ನಾನು ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸುತ್ತೇನೆ ಎಂದರು.

ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಆದರೆ ಪ್ರಶಸ್ತಿಯಿಂದ ನನಗೆ ಸಂತೋಷ ಖಂಡಿತ ಆಗಿಲ್ಲ. ನಾನು ಕಳೆದ ಕೆಲವು ದಿನಗಳಿಂದ ರಾಯಚೂರು, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸ ಮಾಡಿ ಇಂದಷ್ಟೇ ಮರಳಿದ್ದೇನೆ. ಅಲ್ಲಿ ನನಗೆ ಬಂದಿರುವ ದೂರುಗಳಿಂದ ನಾನು ವಿಚಲಿತಗೊಂಡಿದ್ದೇನೆ. ಜೀವನದ ಸಂಧ್ಯಾಕಾಲದಲ್ಲಿರುವ ಈ ಹಿರಿಯ ಜೀವಗಳಿಗೆ ತ್ವರಿತ ನ್ಯಾಯ ನೀಡಲು ಸಾಧ್ಯವಾಗದ ಬಗ್ಗೆ ನನಗೆ ದು:ಖವಿದೆ ಎಂದರು.

ಇಂದು ಕುಂದಾಪುರದ ಸಬ್ಲಾಡಿಯಿಂದ 91ರ ಹರೆಯ ಭುಜಂಗ ಶೆಟ್ಟಿ ಹಾಗೂ 86ರ ಹರೆಯ ಅವರ ಪತ್ನಿ ನನ್ನ ಬಳಿ ಬಂದಿದ್ದರು. ಮಕ್ಕಳಿಂದ ಅವರು ಅನುಭವಿಸಿದ ಕಣ್ಣೀರ ಕಥೆಯನ್ನು ಕೇಳಿದಾಗ, ನಾನು ಪ್ರಶಸ್ತಿ ಸ್ವೀಕರಿಸಬೇಕೆ ಎಂಬ ಬಗ್ಗೆ ನನ್ನಲ್ಲೇ ಜಿಜ್ಞಾಸೆ ಇದೆ. ಇವರಂಥ 30-40 ಮಂದಿಗೆ ನ್ಯಾಯ ಕೊಡಿಸುವುದು ನನಗೆ ಪ್ರಶಸ್ತಿ ಸ್ವೀಕರಿಸುವುದಕ್ಕಿಂತ ಹೆಚ್ಚು ಮುಖ್ಯವೆನಿಸಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಡಾ.ರವೀಂದ್ರನಾಥ ಶ್ಯಾಭಾಗ್ ಹೇಳಿದರು.

ಮಣಿಪಾಲ ವಿವಿಯಲ್ಲಿ ಫಾರ್ಮಕಾಲಜಿ ವಿಭಾಗದ ಪ್ರೊಪೆಸರ್ ಆಗಿ ಸೇವಾ ನಿವೃತ್ತರಾದ ಡಾ. ಶ್ಯಾನುಭಾಗ್, ಅದಾಗಲೇ ಬಳಕೆದಾರರ ವೇದಿಕೆಯ ಮೂಲಕ ಗ್ರಾಹಕರ ಪರ ಹೋರಾಟಕ್ಕೆ ಜಿಲ್ಲೆಯಲ್ಲಿ ನೆಲೆಯನ್ನು ಒದಗಿಸಿದ್ದರು. ಅವರು ಕಳೆದ ಮೂರು ದಶಕಗಳಿಂದ ಬಳಕೆದಾರರ ಹಾಗೂ ಮಾನವ ಹಕ್ಕುಗಳ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಕಳೆದ ಒಂದು ದಶಕಕ್ಕಿಂತಲೂ ಅಧಿಕ ಸಮಯದಿಂದ ಹಿರಿಯ ನಾಗರಿಕರ ಪರ ಹೋರಾಟದಲ್ಲಿ ವ್ಯಸ್ತರಾಗಿದ್ದಾರೆ. ಈ ಮಧ್ಯೆ ಅವರು ಪರಿಸರ ಸಂರಕ್ಷಣೆಯಲ್ಲೂ ಅವರು ತಮ್ಮ ಛಾಪನ್ನು ಮೂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X