ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
ವಿಟ್ಲ, ನ. 12: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ರಘು ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಸಲಾಂ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಅವರ ನೇತತ್ವದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಗೌರವಾಧ್ಯಕ್ಷರಾಗಿ ಕೆ. ಯಾದವ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ನಾರಾಯಣ ಬೆಳ್ಳಾರೆ ಹಾಗೂ ಮೀನಾಕ್ಷಿ ಬಂಟ್ವಾಳ, ಜೊತೆ ಕಾರ್ಯದರ್ಶಿಗಳಾಗಿ ಕುಮಾರ ಐವರ್ನಾಡು ಹಾಗೂ ಉದಯ ನಾಯ್ಕ, ಸಂಘಟನಾ ಕಾರ್ಯದರ್ಶಿಗಳಾಗಿ ಪ್ರಶಾಂತಿ, ಗುಲಾಬಿ, ರೂಪ ಅವರನ್ನು ಆರಿಸಲಾಯಿತು. ಅಲ್ಲದೆ ಇತರ 21 ಮಂದಿಯನ್ನು ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನಾಗಿ ನೇಮಿಸಲಾಯಿತು.
Next Story