ಬಂಟ್ವಾಳ: ಜಮೀಯ್ಯತುಲ್ ಫಲಾಹ್ ಅಧ್ಯಕ್ಷರಾಗಿ ಆಸಿಫ್ ಇಕ್ಬಾಲ್ ಆಯ್ಕೆ
ವಿಟ್ಲ, ನ.19: ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ಆಸಿಫ್ ಇಕ್ಬಾಲ್ ಆಯ್ಕೆಯಾಗಿದ್ದಾರೆ. ಮೆಲ್ಕಾರ್ ಎಂ.ಎಚ್. ಕಂಪೌಂಡ್ನಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಉಪಾಧ್ಯಕ್ಷರಾಗಿ ಹಾಜಿ ಮುಹಮ್ಮದ್ ರಫೀಕ್, ಹಾಜಿ ಎಸ್.ಅಬ್ಬಾಸ್ ಸಜಿಪ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ.ಶಾಹುಲ್ ಹಮೀದ್, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಗೋಳ್ತಮಜಲು, ಕೋಶಾಧಿಕಾರಿಯಾಗಿ ಎಂ.ಎಚ್. ಇಕ್ಬಾಲ್, ಸಂಘಟನಾ ಕಾರ್ಯದರ್ಶಿಯಾಗಿ ಸುಲೈಮಾನ್ ಸೂರಿಕುಮೇರು, ಪತ್ರಿಕಾ ಕಾರ್ಯದರ್ಶಿಯಾಗಿ ಪಿ.ಮುಹಮ್ಮದ್ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಅಬ್ದುಲ್ ರಝಾಕ್ ಅನಂತಾಡಿ, ಎಫ್.ಎಂ. ಬಶೀರ್, ಬಿ.ಎಂ. ತುಂಬೆ, ಎಸ್.ಎಂ. ಮುಹಮ್ಮದ್ ಅಲಿ ಶಾಂತಿಅಂಗಡಿ, ಬಿ.ಎಂ.ಅಬ್ಬಾಸ್ ಅಲಿ, ಬಿ.ಎ.ಮುಹಮ್ಮದ್ ಬಂಟ್ವಾಳ, ಕೆ.ಎಸ್.ಮುಹಮ್ಮದ್ ಕಡೇಶ್ವಾಲ್ಯ, ಸಯ್ಯದ್ ಇರಾ, ಮುಹಮ್ಮದ್ ಎನ್., ಕೆ. ಅಬೂಬಕರ್ ವಿಟ್ಲ, ಹಾಜಿ ಅಬ್ದುಲ್ ರಹಿಮಾನ್, ಅಬ್ದುಲ್ ಹಕೀಂ ಕಲಾಯಿ, ಅಬ್ದುಲ್ ಲತೀಫ್ ನೇರಳಕಟ್ಟೆ ಅವರನ್ನು ಆರಿಸಲಾಯಿತು. ಹಾಗೂ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಶೇಖ್ ರಹ್ಮತುಲ್ಲಾ ಕಾವಳಕಟ್ಟೆ ಅವರನ್ನು ನೇಮಿಸಲಾಯಿತು.
ಜಮೀಯ್ಯತುಲ್ ಫಲಾಹ್ ನಿಕಟಪೂರ್ವಾಧ್ಯಕ್ಷ ಬಿ.ಎಂ. ತುಂಬೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಸಂಘದ ಜಿಲ್ಲಾ ಕೋಶಾಧಿಕಾರಿ ಝಮೀರ್ ಅಂಬರ್, ಸದಸ್ಯ ಕೆ.ಎಂ.ಕೆ. ಮಂಜನಾಡಿ ಭಾಗವಹಿಸಿದ್ದರು. ಆದಂ ಹಾಜಿ ಸಹಕರಿಸಿದರು..