ನ.26: ಪರಮ ಪ್ರಸಾದ ಮೆರವಣಿಗೆ
ಉಡುಪಿ, ನ.23: ಉಡುಪಿ ಕ್ರೈಸ್ತ ಧರ್ಮಪ್ರಾಂತ ಮಟ್ಟದ ವಾರ್ಷಿಕ ಪರಮ ಪ್ರಸಾದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವವು ನ.26ರಂದು ಸಂಜೆ 3:30ಕ್ಕೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ಜರಗಲಿದೆ.
ವಾರ್ಷಿಕ ಪರಮಪ್ರಸಾದ ಮೆರವಣಿಗೆಯ ದಿವ್ಯ ಬಲಿಪೂಜೆಯನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಅರ್ಪಿಸಲಿದ್ದು, ಬಳಿಕ ಪರಮ ಪ್ರಸಾದವನ್ನು ಅಲಂಕರಿಸಲಾದ ತೆರೆದ ವಾಹನದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಮೂಲಕ ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ತನಕ ಮೆರವಣಿಗೆಯಲ್ಲಿ ಕೊಂಡೊಯ್ದು ಪರಮಪ್ರಸಾದಕ್ಕೆ ಸಾರ್ವಜನಿಕ ಗೌರವ ಸಲ್ಲಿಸಲಾಗುವುದು. ಮೌಂಟ್ ರೋಸರಿ ಚರ್ಚಿನಲ್ಲಿ ಬಳಿಕ ಪ್ರವಚನ ಹಾಗೂ ಆಶೀರ್ವಚನ ಜರುಗಲಿದೆ ಎಂದು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story