ಮೀಲಾದುನ್ನಬಿ: ದ.ಕ., ಉಡುಪಿಗೆ ಡಿ.1ರಂದು ಸರಕಾರಿ ರಜೆ
ಮಂಗಳೂರು , ನ.29: ಮೀಲಾದುನ್ನಬಿ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಡಿ.1ರಂದು ರಜೆ ಘೋಷಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.
ಮೀಲಾದುನ್ನಬಿ ಆಚರಣೆಗೆ ಡಿ.2ರಂದು ಸರಕಾರಿ ರಜೆ ಘೋಷಿಸಿ ರಾಜ್ಯ ಸರಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಕರಾವಳಿಯ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೀಲಾದುನ್ನಬಿಯನ್ನು ಮುಸ್ಲಿಮರು ಡಿ.1ರಂದೇ ಆಚರಿಸುತ್ತಿರುವುದರಿಂದ ಅಂದೇ ಸರಕಾರಿ ರಜೆ ಘೋಷಿಸುವಂತೆ ಆಹಾರ ಸಚಿವ ಯು.ಟಿ.ಖಾದರ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಡಿ.1ರಂದು ರಜೆ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಖಾದರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Next Story