Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಭೂಮಿ ಶಿಸ್ತು ಕಲಿಸಿದರೆ, ಸಿನೆಮಾ ಅಹಂ...

ರಂಗಭೂಮಿ ಶಿಸ್ತು ಕಲಿಸಿದರೆ, ಸಿನೆಮಾ ಅಹಂ ಬೆಳೆಸುತ್ತದೆ: ಬಿ.ಜಯಶ್ರೀ

ವಾರ್ತಾಭಾರತಿವಾರ್ತಾಭಾರತಿ22 Dec 2017 9:49 PM IST
share
ರಂಗಭೂಮಿ ಶಿಸ್ತು ಕಲಿಸಿದರೆ, ಸಿನೆಮಾ ಅಹಂ ಬೆಳೆಸುತ್ತದೆ: ಬಿ.ಜಯಶ್ರೀ

 ಉಡುಪಿ, ಡಿ.16: ರಂಗಭೂಮಿ ನಮ್ಮನ್ನು ನಾವಾಗಿ ಬೆಳೆಯಲು ಸಹಾಯ ಮಾಡುತ್ತದೆ ಮತ್ತು ಶಿಸ್ತು ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಆದರೆ ಬೆಳ್ಳಿ ಪರದೆ ನಮ್ಮನ್ನು ದೊಡ್ಡದಾಗಿ ಬೆಳೆಸಿದರೂ ಅಹಂನ್ನು ತಂದುಕೊಡುತ್ತದೆ. ರಂಗಭೂಮಿ, ನೃತ್ಯ, ಸಂಗೀತ ಕಲೆಗಳು ಮಾತ್ರ ನಮ್ಮನ್ನು ನಾವು ಆಗಿ ಬೆಳೆಸುತ್ತದೆ ಎಂದು ಪದ್ಮಶ್ರೀ ಪುರಸ್ಕೃತ ರಂಗ ಕಲಾವಿದೆ ಬಿ.ಜಯಶ್ರೀ ಹೇಳಿದ್ದಾರೆ.

ಉಡುಪಿ ಪರ್ಯಾಯ ಪೇಜಾವರ ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಆಯೋಜಿಸಲಾದ ಕೊಡವೂರು ನೃತ್ಯ ನಿಕೇತನ ಸಂಸ್ಥೆಯ ರಜತ ವರ್ಷದ ರಜತಪಥ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಯಾವುದೇ ಪಾತ್ರವನ್ನು ತನ್ನದಾಗಿಸಿಕೊಂಡು ಪೇಕ್ಷಕರ ಮುಂದೆ ತಾನು ಯಾರು ಎಂಬುದು ಗೊತ್ತಾಗದಂತೆ ಆ ಪಾತ್ರ ಯಾವುದು ಎಂಬುದು ಹೇಳುವ ಶಕ್ತಿ ಇರುವುದು ನಾಟಕಕ್ಕೆ ಮಾತ್ರ. ಸಿನೆಮಾದಲ್ಲಿ ಪಾತ್ರದ ಹೆಸರು ಹೇಳಲ್ಲ. ಆದರೆ ಪಾತ್ರ ಮಾಡಿದವರ ಹೆಸರು ಹೇಳುತ್ತಾರೆ. ಆದರೆ ನಾಟಕದಲ್ಲಿ ಪಾತ್ರ ಮಾಡಿದವರ ಅಲ್ಲ ಪಾತ್ರದ ಹೆಸರು ಹೇಳುತ್ತೇವೆ. ಅಲ್ಲಿ ವ್ಯಕ್ತಿ ಪಾತ್ರದೊಳಗೆ ಜೀವಂತವಾಗಿರುತ್ತಾನೆ ಎಂಬುದಕ್ಕೆ ಇದು ದೊಡ್ಡ ಸಾಕ್ಷಿ ಎಂದರು.

ರಂಗ ನಿರ್ದೇಶಕ ಡಾ.ಶ್ರೀಪಾದ ಭಟ್ ಮಾತನಾಡಿ, ವರ್ಣ, ಜಾತಿ, ಮತ ಗಳ ಧ್ವೇಷದಿಂದಾಗಿ ವಿಶ್ವದ ಪರಿಕಲ್ಪನೆ ಇಂದು ನಾಶವಾಗಿ ನಾವು ಸಂಕುಚಿತ ರಾಗುತ್ತಿದ್ದೇವೆ. ಇಡೀ ವಿಶ್ವವನ್ನು ಒಂದಾಗಿಸುವ ಶಕ್ತಿ ಇರುವುದು ಕಲೆಗೆ ಮಾತ್ರ ಎಂದು ಅಭಿಪ್ರಾಯ ಪಟ್ಟರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ಕರಾ ವಳಿ ನೃತ್ಯ ಕಲಾ ಪರಿಷತ್ತಿನ ಅಧ್ಯಕ್ಷ ಕಮಲಾಕ್ಷ ಆಚಾರ್ ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಧೀರ್ ರಾವ್ ಕೊಡವೂರು ಸ್ವಾಗತಿಸಿ ದರು. ಚೈತನ್ಯ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಂಸ್ಥೆಯ ಕಲಾ ವಿದರಿಂದ ‘ಚಿತ್ರಾ’ ನೃತ್ಯ ನಾಟಕ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X