ಡಿ. 29: ಯುನಿವೆಫ್ ವತಿಯಿಂದ ದೇರಳಕಟ್ಟೆಯಲ್ಲಿ 'ಪ್ರವಾದಿ ಸಂದೇಶ'
ದೇರಳಕಟ್ಟೆ, ಡಿ. 28: ಯುನಿವೆಫ್ ಕರ್ನಾಟಕ ಫೆ. 2ರ ತನಕ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಪ್ರವಾದಿ ಮುಹಮ್ಮದ್ (ಸ) ರ ಸಂದೇಶ ಪ್ರಚಾರ ಅಭಿಯಾನದ ಸಾರ್ವಜನಿಕ ಸಭೆಯು ದೇರಳಕಟ್ಟೆಯ ಸಿಟಿ ಗ್ರೌಂಡ್ ನಲ್ಲಿ ಡಿ.29ರಂದು ಸಂಜೆ 6:45ಕ್ಕೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು 'ಸಾಮಾಜಿಕ ಬದಲಾವಣೆ ಮತ್ತು ಪ್ರವಾದಿ (ಸ)' ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸೈಫುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story