ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ
ಚಿಕ್ಕಮಗಳೂರು, ಡಿ.30: ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಗಾಯಾಳುಗಳು ಮತ್ತು ರೋಗಿಗಳ ಪ್ರಾಣ ಉಳಿಸಲು ಮುಂದಾಗಬೇಕು ಎಂದು ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಹೇಳಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ವಿವಿಧ ಘಟಕಗಳ ಕಾರ್ಯಕರ್ತರು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ರಾಹಿಲ್ ಶರೀಫ್ ಮಾತನಾಡಿ, ಸಾರ್ವಜನಿಕರು ರಕ್ತ ನೀಡುವುದನ್ನು ದಾನವೆಂದು ಪರಿಗಣಿಸಬಾರದು ಅದನ್ನು ತಮ್ಮ ಜವಾಬ್ದಾರಿ ಎಂದು ತಿಳಿಯಬೇಕು ಎಂದರು.
ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ನವಾಝ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾದಾಬ್ ಆಲಂ ಖಾನ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಜೆ. ವಿನಾಯಕ, ಮಧು, ಮುಖಂಡರಾದ ನೂರ್ ಅಹಮದ್, ಅಕ್ರಂ, ರಿಝ್ವಾನ್, ಸಾದಿಕ್, ಅಸ್ಗರ್ ಉಪಸ್ಥಿತರಿದ್ದರು.
Next Story