ಮುಂಡಗೋಡ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಮುಂಡಗೋಡ, ಡಿ. 31: ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಕೆಂಚಿಕೊಪ್ಪ ಗ್ರಾಮದ ಪೂರ್ಣೀಮಾ ಎಸ್.ನಾಯ್ಕಾ(18) ಆತ್ಮಹತ್ಯೆ ಮಾಡಿಕೊಂಡವರು.
ಮನೆಯಲ್ಲಿ ಕುಟುಂಬಸ್ಥರು ಮನೆಗೆಲಸ ಮಾಡು ಎಂದು ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡು ತೋಟದ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂದಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story