ಮಂಗಳೂರು: ಜಮೀಯ್ಯತುಲ್ ಫಲಾಹ್ನಿಂದ ಪ್ರೇರಣಾ ಶಿಬಿರ
ಮಂಗಳೂರು, ಜ.19: ಜಮೀಯ್ಯತುಲ್ ಫಲಾಹ್ ಮೂಡುಬಿದಿರೆ ಘಟಕದ ವತಿಯಿಂದ ಕೊಣಾಜೆ ಸಮೀಪದ ಅಡ್ಕರೆಪಡ್ಪುವಿನ ಗ್ರೀನ್ವೀವ್ ವಿದ್ಯಾ ಸಂಸ್ಥೆಯಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮೂಡುಬಿದಿರೆಯ ಧವಳಾ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್ ಶೆಟ್ಟಿ ಪರೀಕ್ಷಾ ತಯಾರಿಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಮೀಯ್ಯತುಲ್ ಫಲಾಹ್ ಪ್ರಧಾನ ಕಾರ್ಯದರ್ಶಿ ಸಲೀಂ ಹಂಡೇಲ್, ಕೋಶಾಧಿಕಾರಿ ಇಬ್ರಾಹೀಂ ಕೋಡಿಜಾಲ್, ಶಿಕ್ಷಕ ಎಂ.ಎಚ್. ಮಲಾರ್, ಅಬೂಬಕರ್ ಉಪಸ್ಥಿತರಿದ್ದರು.
Next Story