ಇರಾದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
ಕೊಣಾಜೆ, ಜ. 21: ಇರಾ ಗ್ರಾಮದ ಕುಕ್ಕಾಜೆ ಬೈಲು ಲಕ್ಷ್ಮೀ ನರಸಿಂಹ ದೇವಸ್ಥಾನದ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಭಯ ಭೀತರಾಗಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಕುಕ್ಕಾಜೆ ಬೈಲಿನ ಲಕ್ಷ್ಮೀ ನರಸಿಂಹ ದೇವಸ್ಥಾನದ ಬಳಿ ಜೆಸಿಬಿ ಕಾರ್ಮಿಕರೊಬ್ಬರು ಕೆಲಸ ಮಾಡುತ್ತಿದ್ದಾಗ ಚಿರತೆಯನ್ನು ಕಂಡಿದ್ದರು. ಬಳಿಕ ಈ ವಿಷಯವು ಗ್ರಾಮದ ಜನರಲ್ಲಿ ಭಯವನ್ನುಂಟು ಮಾಡಿದ್ದು, ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದರು.
ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story