ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ರಾಮಸೇನೆಯ ಶಂಕರ್ ನಾಯ್ಕ ಬಂಧನ
ಭಟ್ಕಳ, ಜ. 23: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಕೋಮು ಪ್ರಚೋದನೆ ನೀಡುವ ಪೋಸ್ಟ್ ಗಳನ್ನು ಹಾಕಿದ್ದ ಆರೋಪದಡಿ ಕಾರವಾರ ಪೊಲೀಸರು ರಾಮಸೇನೆಯ ಉತ್ತರ ಪ್ರಾಂತ ಪ್ರಮುಖ, ಭಟ್ಕಳದ ಚೌಥನಿ ನಿವಾಸಿ ಶಂಕರ್ ನಾಯ್ಕ ಎಂಬಾತನನ್ನು ಬಂಧಿಸಿದ್ದು, ಗೋಕರ್ಣ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಹಲವು ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಗೋಕರ್ಣ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಆದೇಶದಂತೆ ಗೋಕರ್ಣ ಪಿ.ಎಸ್.ಐ ಸಂತೋಷ, ಅಂಕೋಲಾ ಪಿ.ಎಸ್.ಪಿ ಶ್ರೀಧರ್ ಹಾಗೂ ಕಾರವಾರ ಪಿ.ಎಸ್.ಐ ನವೀನ್ ನಾಯ್ಕ ನೇತೃತ್ವದಲ್ಲಿ ಪೊಲೀಸರ ತಂಡ ಈತನ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Next Story