ಯುನಿವೆಫ್: ಇಂದು ಕೃಷ್ಣಾಪುರದಲ್ಲಿ ಪ್ರವಾದಿ ಸಂದೇಶ ಕಾರ್ಯಕ್ರಮ
ಸುರತ್ಕಲ್, ಜ.29: ಯುನಿವೆಫ್ ಕರ್ನಾಟಕ 2017ರ ಡಿಸೆಂಬರ್ 8ರಿಂದ ಫೆಬ್ರವರಿ 16ರ ತನಕ ಹಮ್ಮಿಕೊಂಡಿರುವ ‘ರಾಷ್ಟ್ರೀಯತೆ, ಜಾತ್ಯತೀತತೆ ಹಾಗೂ ಸ್ವಚ್ಛತೆ ಮತ್ತು ಪ್ರವಾದಿ ಮುಹಮ್ಮದ್(ಸ.)’ ಎಂಬ ಕೇಂದ್ರೀಯ ವಿಷಯದಲ್ಲಿ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಸಾರ್ವಜನಿಕ ಕಾರ್ಯಕ್ರಮವು ಜ.30ರಂದು ಕೃಷ್ಣಾಪುರದ ಪ್ಯಾರಡೈಸ್ ಗ್ರೌಂಡ್ನಲ್ಲಿ ಜರುಗಲಿದೆ.
ಸಂಜೆ 7ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು ‘ಭಾರತದ ಮುಸ್ಲಿಮರ ವರ್ತಮಾನ ಮತ್ತು ಭವಿಷ್ಯ’ ಎಂಬ ವಿಷಯದಲ್ಲಿ ಪ್ರವಚನ ನೀಡಲಿದ್ದಾರೆ ಎಂದು ಯುನಿವೆಫ್ ದ.ಕ. ಜಿಲ್ಲಾಧ್ಯಕ್ಷ ಸೈಫುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story