ಹನಿ ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ
ಉಡುಪಿ, ಫೆ.18: ವಿಶೇಷ ಕೇಂದ್ರೀಯ ಯೋಜನೆಯಡಿ ಪರಿಶಿಷ್ಟ ವರ್ಗದ ಕೃಷಿಕರಿಗೆ ಹನಿ ನೀರಾವರಿ ಘಟಕ ನೀಡುವ ಸೌಲ್ಯವಿದ್ದು, ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಪ್ರಮಾಣ ಪತ್ರ, ನೀರಿನ ಸೌಲ್ಯವಿರುವ ಬಗ್ಗೆ ಪ್ರಮಾಣ ಪತ್ರ ಹಾಗೂ ಗ್ರಾಪಂ ಶಿಪಾರಸ್ಸು ಪತ್ರ ದೊಂದಿಗೆ ಮಾ.15ರೊಳಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ ಮಣಿಪಾಲ, ಉಡುಪಿ ಇವರ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಸಂಬಂಧಪಟ್ಟ ಗ್ರಾಪಂಗಳಲ್ಲಿ, ಸಹಾಯ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಇಲ್ಲಿ ಪಡೆಯಬಹುದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574814ನ್ನು ಸಂಪರ್ಕಿಸಬಹುದು ಎಂದು ಯೋಜನಾ ಸಮನ್ವಯಾ ಧಿಕಾರಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇವರ ಪ್ರಕಟಣೆ ತಿಳಿಸಿದೆ.
Next Story